ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…