#Pesticides | ಅರಣ್ಯಾಧಿಕಾರಿ ಪ್ರಾಣಕ್ಕೆ ಕುತ್ತು ತಂದ ಕಳೆನಾಶಕ | ಕಳೆಔಷಧಿ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ |

July 8, 2023
11:29 AM
ಕಳೆನಾಶಕ ಸಿಂಪಡಣೆಯ ಬಳಿಕ ಸರಿಯಾಗಿ ಮೈ ತೊಳೆಯದೆ ಊಟ ಹಾಗೂ ನೀರು ಕುಡಿದ ಕಾರಣದಿಂದ ಅಸ್ವಸ್ಥಗೊಂಡ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಇತ್ತೀಚಿನ ದಿನಗಳು ಹೇಗಾಗಿದೆ ಎಂದರೆ ನಾಳೆ ಹೇಗಾದರು ಸರಿ, ಇವತ್ತು ಬದುಕಿದರೆ ಸಾಕು ಅನ್ನೋ ಮನಸ್ಥಿತಿ ನಮ್ಮದು. ನಮ್ಮ ಕೃಷಿ ಭೂಮಿಯಲ್ಲಿ, ನಮ್ಮ ಸುತ್ತ ಮುತ್ತ ಪರಿಸರ, ಕಾಡು, ಅರಣ್ಯದಲ್ಲಿ ಕಳೆ ಬೆಳೆಯೋದು ಇಂದು ನಿನ್ನೆಯದಲ್ಲ. ಪ್ರಕೃತಿ ನಿರ್ಮಿತ. ಆದರೆ ಅದನ್ನು ಹಿಂದೆ ನಮ್ಮ ಹಿರಿಯರು ಕಳೆ ಕಡಿದು ನಾಶ ಮಾಡುತ್ತಿದ್ದರು. ಆದರೆ ಈಗ ಇದಕ್ಕೆ ಜನನೂ ಸಿಗಲ್ಲ, ಸಮಯವೂ ಇಲ್ಲ. ಅದಕ್ಕೆ ಬಂದಿದೆ ಕಳೆ ನಾಶಕ. ಒಮ್ಮೆ ಭೂ ತಾಯಿ ಮಡಿಲಿಗೆ ವಿಷ ಹರಡಿದರೆ ಅಲ್ಲಿಗೆ ನಮ್ಮ ಈ ವರ್ಷದ ಕಳೆ ತೆಗೆಯುವ ಕೆಲಸ ಮುಗಿಯಿತು. ಆದರೆ ಅದರಿಂದ ಆಗುವ ಅನಾಹುತದ ಬಗ್ಗೆ ಗೊತ್ತಿದ್ದರೂ ಜಾಣ ಕಿವುಡರಂತೆ ವರ್ತಿಸುತ್ತೇವೆ. ಇದರ ಪರಿಣಾಮವೇ ಇಂದು ಈ ಅಧಿಕಾರಿ ತನ್ನ ಪ್ರಾಣವನ್ನು ಕಳೆದುಕೊಳ್ಳುವಂತಾಯಿತು…!

ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ #ForestOfficer ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್​​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್  ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಲ್ಲಿಯೂ ಚಿಕಿತ್ಸೆ ಸಿಗಲು ಒಂದು ದಿನ ವಿಳಂಬ ಆಗಿದೆ ಎನ್ನಲಾಗಿದೆ. ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಜು.07ರಂದು ಸಂಜೆ ಯೋಗೇಶ್ ನಾಯ್ಕ್ ಸಾವನ್ನಪ್ಪಿದ್ದಾರೆ. ಇದೀಗ ಹೆಂಡತಿ ಮಗುವನ್ನು ಹೊಂದಿದ್ದ ಅಧಿಕಾರಿಯ ಕುಟುಂಬ ಅತಂತ್ರವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror