Advertisement
ಸುದ್ದಿಗಳು

#Pesticides | ಅರಣ್ಯಾಧಿಕಾರಿ ಪ್ರಾಣಕ್ಕೆ ಕುತ್ತು ತಂದ ಕಳೆನಾಶಕ | ಕಳೆಔಷಧಿ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ |

Share

ಇತ್ತೀಚಿನ ದಿನಗಳು ಹೇಗಾಗಿದೆ ಎಂದರೆ ನಾಳೆ ಹೇಗಾದರು ಸರಿ, ಇವತ್ತು ಬದುಕಿದರೆ ಸಾಕು ಅನ್ನೋ ಮನಸ್ಥಿತಿ ನಮ್ಮದು. ನಮ್ಮ ಕೃಷಿ ಭೂಮಿಯಲ್ಲಿ, ನಮ್ಮ ಸುತ್ತ ಮುತ್ತ ಪರಿಸರ, ಕಾಡು, ಅರಣ್ಯದಲ್ಲಿ ಕಳೆ ಬೆಳೆಯೋದು ಇಂದು ನಿನ್ನೆಯದಲ್ಲ. ಪ್ರಕೃತಿ ನಿರ್ಮಿತ. ಆದರೆ ಅದನ್ನು ಹಿಂದೆ ನಮ್ಮ ಹಿರಿಯರು ಕಳೆ ಕಡಿದು ನಾಶ ಮಾಡುತ್ತಿದ್ದರು. ಆದರೆ ಈಗ ಇದಕ್ಕೆ ಜನನೂ ಸಿಗಲ್ಲ, ಸಮಯವೂ ಇಲ್ಲ. ಅದಕ್ಕೆ ಬಂದಿದೆ ಕಳೆ ನಾಶಕ. ಒಮ್ಮೆ ಭೂ ತಾಯಿ ಮಡಿಲಿಗೆ ವಿಷ ಹರಡಿದರೆ ಅಲ್ಲಿಗೆ ನಮ್ಮ ಈ ವರ್ಷದ ಕಳೆ ತೆಗೆಯುವ ಕೆಲಸ ಮುಗಿಯಿತು. ಆದರೆ ಅದರಿಂದ ಆಗುವ ಅನಾಹುತದ ಬಗ್ಗೆ ಗೊತ್ತಿದ್ದರೂ ಜಾಣ ಕಿವುಡರಂತೆ ವರ್ತಿಸುತ್ತೇವೆ. ಇದರ ಪರಿಣಾಮವೇ ಇಂದು ಈ ಅಧಿಕಾರಿ ತನ್ನ ಪ್ರಾಣವನ್ನು ಕಳೆದುಕೊಳ್ಳುವಂತಾಯಿತು…!

ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ #ForestOfficer ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್​​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್  ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಅಲ್ಲಿಯೂ ಚಿಕಿತ್ಸೆ ಸಿಗಲು ಒಂದು ದಿನ ವಿಳಂಬ ಆಗಿದೆ ಎನ್ನಲಾಗಿದೆ. ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂದಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಜು.07ರಂದು ಸಂಜೆ ಯೋಗೇಶ್ ನಾಯ್ಕ್ ಸಾವನ್ನಪ್ಪಿದ್ದಾರೆ. ಇದೀಗ ಹೆಂಡತಿ ಮಗುವನ್ನು ಹೊಂದಿದ್ದ ಅಧಿಕಾರಿಯ ಕುಟುಂಬ ಅತಂತ್ರವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

1 hour ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

2 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

10 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

12 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

17 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

18 hours ago