Advertisement
The Rural Mirror ಕಾಳಜಿ

#Elephant | ಆನೆ-ಮಾನವ ಸಂಘರ್ಷ ತಡೆಗಟ್ಟಲು ಅರಣ್ಯಾಧಿಕಾರಿಗಳಿಂದ ಪ್ಲಾನ್ | ರೈಲ್ವೇ ಕಂಬಿಗಳೇ ಕಾಡಾನೆಗಳಿಗೆ ಚಕ್ರವ್ಯೂಹ |

Share

ಕಾಡಾನೆ ಮತ್ತು ಮಾನವ ಸಂಘರ್ಷ ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಇದನ್ನು ತಡೆಗಟ್ಟುವುದೇ ದೊಡ್ಡ ಸವಾಲಾಗಿದೆ. ಅರಣ್ಯ ಇಲಾಖೆಯಂತೂ ಈ ವಿಷಯದಲ್ಲಿ ಅನೇಕ ಐಡಿಯಾಗಳನ್ನು ಮಾಡುತ್ತಲೇ ಇದೆ. ಕೆಲವು ಕಡೆ ಕೆಲವು ಯೋಜನೆಗಳಿಗೆ ಫಲ ಸಿಕ್ಕಿದೆ. ಇನ್ನೂ ಕೆಲವು ಕಡೆ ವ್ಯರ್ಥ ಪ್ರಯತ್ನವಾಗಿದೆ. ಆದರೆ ಈಗ ಈ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯ ಇಲಾಖೆ  ಹೊಸ ಮಾದರಿಯೊಂದನ್ನು ಕಂಡುಕೊಂಡಿದೆ. ಈ ಮೂಲಕ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ.

ಕರ್ನಾಟಕದ ಹಲವೆಡೆ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲು ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ.

ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲು ಬ್ಯಾರಿಕೇಡ್‌ ಗಳು ಹೆಚ್ಚು ಪರಿಣಾಮಕಾರಿಯಾಗಿದೆ.

ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ. ಈ ಮೊದಲು ಸೋಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಿದೆ.

ಇದೇ ರೀತಿ ಇತರ ಕಾಡಂಚಿನ ಭಾಗಗಳಿಗೂ ರೈಲು ಬೇಲಿಗಳನ್ನು ಹಾಕಿದರೆ, ತಕ್ಕ ಮಟ್ಟಿನ ಕಾಡಾನೆ ಹಾವಳಿಯನ್ನು ತಡೆಯಬಹುದು. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ಇಲ್ಲೂ ಹಲವು ಪ್ರಯತ್ನಗಳು ನಡೆಯುತ್ತಿದೆ. ಪ್ರತೀ ವರ್ಷ ಕೃಷಿ ಹಾನಿ ವಿಪರೀತವಾಗುತ್ತಿದೆ. ಇಲ್ಲಿ ಕೃಷಿಕರು ಆನೆ ಓಡಿಸಲೇ ಹರಸಾಹಸ ಪಡುತ್ತಿದ್ದಾರೆ.

Source: Social Media and Video

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago