Advertisement
The Rural Mirror ಕಾಳಜಿ

#Elephant | ಆನೆ-ಮಾನವ ಸಂಘರ್ಷ ತಡೆಗಟ್ಟಲು ಅರಣ್ಯಾಧಿಕಾರಿಗಳಿಂದ ಪ್ಲಾನ್ | ರೈಲ್ವೇ ಕಂಬಿಗಳೇ ಕಾಡಾನೆಗಳಿಗೆ ಚಕ್ರವ್ಯೂಹ |

Share

ಕಾಡಾನೆ ಮತ್ತು ಮಾನವ ಸಂಘರ್ಷ ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಇದನ್ನು ತಡೆಗಟ್ಟುವುದೇ ದೊಡ್ಡ ಸವಾಲಾಗಿದೆ. ಅರಣ್ಯ ಇಲಾಖೆಯಂತೂ ಈ ವಿಷಯದಲ್ಲಿ ಅನೇಕ ಐಡಿಯಾಗಳನ್ನು ಮಾಡುತ್ತಲೇ ಇದೆ. ಕೆಲವು ಕಡೆ ಕೆಲವು ಯೋಜನೆಗಳಿಗೆ ಫಲ ಸಿಕ್ಕಿದೆ. ಇನ್ನೂ ಕೆಲವು ಕಡೆ ವ್ಯರ್ಥ ಪ್ರಯತ್ನವಾಗಿದೆ. ಆದರೆ ಈಗ ಈ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯ ಇಲಾಖೆ  ಹೊಸ ಮಾದರಿಯೊಂದನ್ನು ಕಂಡುಕೊಂಡಿದೆ. ಈ ಮೂಲಕ ಅರಣ್ಯ ಇಲಾಖೆ ರೈತರಿಗೆ ನೆರವಾಗಿದೆ.

ಕರ್ನಾಟಕದ ಹಲವೆಡೆ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಇದರಿಂದ ರೈತರು ರೋಸಿಹೋಗಿದ್ದಾರೆ. ಹೊಲ-ಗದ್ದೆ ತೋಟಗಳಿಗೆ ನುಗ್ಗಿ ರೈತ ಬೆಳೆದ ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಆನೆಗಳಿಗೆ ಕಡಿವಾಣ ಹಾಕುವಂತೆ ರೈತರು, ಅರಣ್ಯ ಇಲಾಖೆಗೆ ಮನವಿ ಮಾಡುತ್ತಲ್ಲೇ ಇದ್ದಾರೆ. ಆದರೂ ಪದೇ ಪದೇ ಕಾಡಾನೆಗಳ ದಾಂಧಲೆ ಪ್ರಕರಣಗಳು ಹೆಚ್ಚುತ್ತಲ್ಲೇ ಇವೆ. ಹೀಗಾಗಿ ಆನೆ ಮತ್ತು ಮಾನವ ಸಂಘರ್ಷವನ್ನು ತಡೆಗಟ್ಟಲು ಚಾಮರಾಜನಗರದ ಅರಣ್ಯಾಧಿಕಾರಿಗಳು ಅರಣ್ಯದಂಚಿನಲ್ಲಿ ರೈಲು ಬ್ಯಾರಿಕೇಡ್ ಗಳನ್ನು ನಿರ್ಮಾಣ ಮಾಡುವ ಮೂಲಕ ರೈತರಿಗೆ ನೆರವಾಗಿದ್ದಾರೆ.

ರಾಜ್ಯದ ವಿವಿಧ ಅರಣ್ಯಗಳ ಅಂಚಿನಲ್ಲಿ ಈವರೆಗೆ 312ಕಿಲೋಮೀಟರ್ ಉದ್ದದ ರೈಲು ಕಂಬಗಳ ತಡೆಗೋಡೆಯನ್ನು ನಿರ್ಮಿಸಿ, ಸಂಘರ್ಷ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾನದ ವಿಡಿಯೋ ತುಣುಕನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಅರಣ್ಯದಂಚಿನಲ್ಲಿ ಯಾವುದೇ ಅಡೆತಡೆ ಇಲ್ಲದೆ ಬೆಳೆ ಬೆಳೆಯುತ್ತಿದ್ದರು. ಬೆಳೆಗಳಿಗೆ ಆನೆ ದಾಳಿಯಿಂದಾಗುವ ನಷ್ಟದಿಂದ ರೈತರು ಬೇಸತ್ತಿದ್ದರು. ಇದೀಗ ತಡೆಗೋಡೆಯನ್ನು ನಿರ್ಮಿಸಿದ್ದರಿಂದ ಆನೆ ದಾಳಿಯಿಂದ ಆ ಭಾಗದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸೋಲಾರ್ ಬೇಲಿ, ಆನೆಕಂದಕಗಳಿಗಿಂತ ರೈಲು ಬ್ಯಾರಿಕೇಡ್‌ ಗಳು ಹೆಚ್ಚು ಪರಿಣಾಮಕಾರಿಯಾಗಿದೆ.

ಆದರೆ, ಸಂಪೂರ್ಣವಾಗಿ ಆನೆ ದಾಳಿಯನ್ನು ನಿಯಂತ್ರಿಸಲು ಇನ್ನೂ 331 ಕಿ.ಮೀ ಉದ್ದದ ರೈಲು ಬ್ಯಾರಿಕೇಡ್ ನಿರ್ಮಾಣದ ಅಗತ್ಯವಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಈ ಕುರಿತು ಅರಣ್ಯ ರಕ್ಷಕ ಆಯಾಜ್ ನೇರ್ಲಿ ಮಾಡಿದ 2 ನಿಮಿಷ 22 ಸೆಕೆಂಡ್​ಗಳ ವಿಡಿಯೋ ವೈರಲ್ ಆಗಿದೆ. ಈ ಮೊದಲು ಸೋಲಾರ್ ಬೇಲಿಗಳನ್ನು ನಿರ್ಮಾಣ ಮಾಡುವುದು, ಆನೆ ಕಂದಕಗಳನ್ನು ನಿರ್ಮಿಸುವುದು ಹೀಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆನೆಗಳು ಜೇನುಹುಳುಗಳಿಗೆ ಹೆದರುವುದರಿಂದ ಜೇನುಗೂಡಿನ ಬೇಲಿಗಳನ್ನು ನಿರ್ಮಿಸಿ ಆನೆ ದಾಳಿಯನ್ನು ತಡೆಯುವ ಪ್ರಯತ್ನ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ರೈಲು ಬ್ಯಾರಿಕೇಡ್​ಗಳ ನಿರ್ಮಾಣವು, ಆನೆ ಮತ್ತು ಮಾನವರ ನಡುವೆ ಸಾಮರಸ್ಯ ಕಲ್ಪಿಸುವ ಈ ವಿನೂತನ ಮಾದರಿಯು ಸಹಕಾರಿಯಾಗಿದೆ.

ಇದೇ ರೀತಿ ಇತರ ಕಾಡಂಚಿನ ಭಾಗಗಳಿಗೂ ರೈಲು ಬೇಲಿಗಳನ್ನು ಹಾಕಿದರೆ, ತಕ್ಕ ಮಟ್ಟಿನ ಕಾಡಾನೆ ಹಾವಳಿಯನ್ನು ತಡೆಯಬಹುದು. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಾದ್ಯಂತ ಆನೆಗಳ ಹಾವಳಿ ಮಿತಿಮೀರುತ್ತಿದೆ. ಇಲ್ಲೂ ಹಲವು ಪ್ರಯತ್ನಗಳು ನಡೆಯುತ್ತಿದೆ. ಪ್ರತೀ ವರ್ಷ ಕೃಷಿ ಹಾನಿ ವಿಪರೀತವಾಗುತ್ತಿದೆ. ಇಲ್ಲಿ ಕೃಷಿಕರು ಆನೆ ಓಡಿಸಲೇ ಹರಸಾಹಸ ಪಡುತ್ತಿದ್ದಾರೆ.

Source: Social Media and Video

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

3 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

9 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

10 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

18 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

20 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago