Advertisement
MIRROR FOCUS

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

Share

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ, ಎನ್.ಆರ್. ಪುರ ತಾಲೂಕು ಬಾಳೆ ಹೊನ್ನೂರು ಬಳಿ ಕಳೆದ 4 ದಿನಗಳ ಅಂತರದಲ್ಲಿ ಆನೆದಾಳಿಯಿಂದ ಇಬ್ಬರು ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಆನೆಗಳು ನಾಡಿನಲ್ಲಿ ಕಾಣಿಸಿಕೊಂಡ ಕೂಡಲೇ ಅರಣ್ಯಾಧಿಕಾರಿಗಳು ಕ್ರಮವಹಿಸಬೇಕು. ಸ್ಥಳೀಯರಿಗೆ ಮಾಹಿತಿ ನೀಡಿ  ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಆನೆ ಕಂದಕಗಳು ಸತತ ಮಳೆಯಿಂದ ಮುಚ್ಚಿಹೋಗಿವೆ, ಸೌರ ತಂತಿ ಬೇಲಿ, ಟೆಂಟಕಲ್ ಫೆನ್ಸಿಂಗ್ ಮರಬಿದ್ದು ಸಂಪರ್ಕ ಕಡಿದುಕೊಂಡಿದ್ದು, ಕೂಡಲೇ ಇವುಗಳ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದ್ದಾರೆ.  ಆನೆಗಳಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೂಡಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಕಾಮಗಾರಿ ಆರಂಭಿಸಿ, ನಿಗದಿತ ಕಾಲಮಿತಿಯಲ್ಲಿ ಕಾಮಾಗಾರಿ ಪೂರ್ಣಗೊಳಿಸಿ ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಅರಣ್ಯ ಸಿಬ್ಬಂದಿ ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಕಾಡಾನೆ ದಾಳಿಗೆ ಕಳೆದ ಒಂದು ವಾರದಲ್ಲಿ 4 ಜನರು ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾಗಿದೆ. ಹೀಗಾಗಿ ಆನೆಗಳ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಇಬ್ಬರು ಹಾಗೂ ಮಡಿಕೇರಿಯಲ್ಲಿ ಇಬ್ಬರು ಮೃತರಾಗಿದ್ದಾರೆ. ಕಳೆದ 7 ವರ್ಷಗಳಲ್ಲಿ ಆನೆಗಳಿಂದಾಗಿ 20 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

8 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

10 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

24 hours ago