Advertisement
MIRROR FOCUS

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

Share

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ, ಎನ್.ಆರ್. ಪುರ ತಾಲೂಕು ಬಾಳೆ ಹೊನ್ನೂರು ಬಳಿ ಕಳೆದ 4 ದಿನಗಳ ಅಂತರದಲ್ಲಿ ಆನೆದಾಳಿಯಿಂದ ಇಬ್ಬರು ಮೃತಪಟ್ಟಿರುವ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಆನೆಗಳು ನಾಡಿನಲ್ಲಿ ಕಾಣಿಸಿಕೊಂಡ ಕೂಡಲೇ ಅರಣ್ಯಾಧಿಕಾರಿಗಳು ಕ್ರಮವಹಿಸಬೇಕು. ಸ್ಥಳೀಯರಿಗೆ ಮಾಹಿತಿ ನೀಡಿ  ಆನೆಗಳನ್ನು ಕಾಡಿಗೆ ಮರಳಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ. ಆನೆ ಕಂದಕಗಳು ಸತತ ಮಳೆಯಿಂದ ಮುಚ್ಚಿಹೋಗಿವೆ, ಸೌರ ತಂತಿ ಬೇಲಿ, ಟೆಂಟಕಲ್ ಫೆನ್ಸಿಂಗ್ ಮರಬಿದ್ದು ಸಂಪರ್ಕ ಕಡಿದುಕೊಂಡಿದ್ದು, ಕೂಡಲೇ ಇವುಗಳ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದ್ದಾರೆ.  ಆನೆಗಳಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ಹೆಚ್ಚುವರಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೂಡಲೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಕಾಮಗಾರಿ ಆರಂಭಿಸಿ, ನಿಗದಿತ ಕಾಲಮಿತಿಯಲ್ಲಿ ಕಾಮಾಗಾರಿ ಪೂರ್ಣಗೊಳಿಸಿ ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಅರಣ್ಯ ಸಿಬ್ಬಂದಿ ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಕಾಡಾನೆ ದಾಳಿಗೆ ಕಳೆದ ಒಂದು ವಾರದಲ್ಲಿ 4 ಜನರು ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾಗಿದೆ. ಹೀಗಾಗಿ ಆನೆಗಳ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಇಬ್ಬರು ಹಾಗೂ ಮಡಿಕೇರಿಯಲ್ಲಿ ಇಬ್ಬರು ಮೃತರಾಗಿದ್ದಾರೆ. ಕಳೆದ 7 ವರ್ಷಗಳಲ್ಲಿ ಆನೆಗಳಿಂದಾಗಿ 20 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 hour ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

12 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago