Advertisement
MIRROR FOCUS

ಮರಳಿ ಗೂಡು ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ | ಕಾಂಗ್ರೆಸ್​ಗೆ ಗುಡ್​ ಬೈ

Share

ಕಳೆದ ವಿಧಾನ ಸಭೆ ಚುನಾವಣೆ(Vidhana sabha Election) ಸಂದರ್ಭದಲ್ಲಿ ಮಾಜಿ ಮುಖ್ಯಮಮಂತ್ರಿ ಜಗದೀಶ್‌ ಶೆಟ್ಟರ್‌(Jagadish Shettar) ಟಿಕೇಟ್‌(Ticket) ವಿಚಾರದಲ್ಲಿ ಮುನಿಸಿಕೊಂಡು ಬಿಜೆಪಿ ಪಕ್ಷವನ್ನು(BJP) ತೊರೆದು ಕಾಂಗ್ರೆಸ್‌(Congress) ಪಕ್ಷದ ಕೈ ಹಿಡಿದಿದ್ದರು. ಇದೀಗ ಶೆಟ್ಟರ್‌ ಮತ್ತೆ ಮರಳಿ ಗೂಡಿಗೆ ಬರಲು ಮನಸ್ಸು ಮಾಡಿದ್ದಾರೆ.  ದೆಹಲಿಯಲ್ಲಿ(Delhi) ಕೇಂದ್ರ ಗೃಹ ಸಚಿವ(Home Minister) ಅಮಿತ್ ಶಾ(Amit Sha) ಭೇಟಿ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಪ್ರಕಟಿಸಿದರು.

ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಬಿಜೆಪಿ ಸೇರ್ಪಡೆಯ ಘೋಷಣೆ ಮಾಡಿರುವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಹೇಳಿದ್ದಾರೆ.ಇಂದು ಸಂಜೆ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆಗಳಿವೆ.

2023ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದಾಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.ಇನ್ನು ವಿಧಾನಸಭಾ ಚುನಾವಣೆ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಬಿಜೆಪಿ ತೊರೆದು  ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಶಾಸಕರಾಗಿ ಗೆದ್ದಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಕಮಲ ಮನೆ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದಾರೆ. ಜಗದೀಶ್ ಶೆಟ್ಟರ್ ಏಪ್ರಿಲ್​​ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಲಿಂಗಾಯತ ಮತಗಳನ್ನು ಸೆಳೆಯಲು ಕೈ ಪಕ್ಷ ಯಶಸ್ವಿಯಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

6 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago