ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಜಗದೀಶ್‌ ಶೆಟ್ಟರ್‌

April 17, 2023
10:17 AM

ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌  ನಾಯಕರ ಸಮ್ಮುಖದಲ್ಲಿ ‘ಕೈ’ ಹಿಡಿದರು.

Advertisement
Advertisement
Advertisement
Advertisement

Advertisement

ಕೆಪಿಸಿಸಿ ಕಚೇರಿಯಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ  ಪಕ್ಷಕ್ಕೆ ಸ್ವಾಗತಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್‌ ನೀಡದ್ದಕ್ಕೆ ಶೆಟ್ಟರ್‌ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೆ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಬೆಂಗಳೂರಿಗೆ ಆಗಮಿಸಿದ್ದ ಶೆಟ್ಟರ್‌ರನ್ನು ಕಾಂಗ್ರೆಸ್‌ ನಾಯಕರು ತಡರಾತ್ರಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಕಾಂಗ್ರೆಸ್‌ ಸೇರುವಂತೆ ಮನವೊಲಿಸಿದರು. ಈ ಎಲ್ಲಾ ಬೆಳವಣಿಗೆಯು ಶೆಟ್ಟರ್‌ ಕಾಂಗ್ರೆಸ್‌ ಸೇರುವುದು ಪಕ್ಕಾ ಎಂಬಂತಿತ್ತು.

Advertisement

 

Advertisement

ಸೋಮವಾರ ಬೆಳಗ್ಗೆ ಲಿಂಗಾಯತ ಸಮುದಾಯದ ನಾಯಕರೇ ಆಗ ಎಂ.ಬಿ.ಪಾಟೀಲ್‌ ಅವರು ಸ್ಕೈ ಗಾರ್ಡನ್‌ ಅಪಾರ್ಟ್‌ಮೆಂಟ್‌ಗೆ ತೆರಳಿ ಶೆಟ್ಟರ್‌ ಅವರನ್ನು ತಮ್ಮ ವಾಹನದಲ್ಲಿ ಕೆಪಿಸಿಸಿ ಕಚೇರಿಗೆ ಕರೆತಂದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror