Advertisement
ಸುದ್ದಿಗಳು

ಆರ್‌ಎಸ್‌ಎಸ್‌ ಮಾಜಿ ಪ್ರಚಾರಕರಿಂದ ನೂತನ ರಾಜಕೀಯ ಪಕ್ಷ ಸ್ಥಾಪನೆ | ಮಧ್ಯಪ್ರದೇಶದಲ್ಲಿ ಘೋಷಣೆ |

Share

ರಾಷ್ಟ್ರೀಯ ಸ್ವಯಂ ಸೇವಕ ಸಂಘವು  ಬಹುದೊಡ್ಡ ಸೇವಾ ಸಂಘಟನೆ. ಅದರ ಅಂಗ ಸಂಸ್ಥೆಗಳಾಗಿ ಸಮಾಜದ ವಿವಿಧ ಸ್ತರಗಳಲ್ಲಿ ವಿವಿಧ ಸಂಘಟನೆಗಳು ಬೆಳೆದವು. ಲಕ್ಷಾಂತರ ಸ್ವಯಂಸೇವಕರು ಬೆಳೆದರು. ಆರ್‌ಎಸ್‌ಎಸ್‌ ಸಾಮಾಜಿಕ ಕೆಲಸ ಮಾಡಿದರೆ ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿಯನ್ನು ಬೆಳೆಸಿತು. ಹಿಂದುತ್ವವೇ ಬಿಜೆಪಿಯ ಉಸಿರು ಎಂದು ಬೆಳೆಸಲಾಯಿತು. ಇದೀಗ ದೇಶದ ವಿವಿಧ ಕಡೆ ಬಿಜೆಪಿ ಬಗ್ಗೆ ವಿರೋಧಿ ಅಲೆ ಕಾಣಿಸಿಕೊಳ್ಳುವುದರ ಜೊತೆಗೆ ಆರ್‌ಎಸ್‌ ಎಸ್‌ ಮಾಜಿ ಪ್ರಮುಖರು ಪಕ್ಷ ಸ್ಥಾಪನೆ, ಪಕ್ಷೇತರ ಹೀಗೇ ಸ್ಫರ್ಧಿಸುವುದು ಕಾಣುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅಂತಹದ್ದೇ ಬಿಸಿ ಮುಟ್ಟಿದ್ದರೆ, ಇದೀಗ ಮಧ್ಯಪ್ರವೇಶದಲ್ಲೂ ಅದೇ ಮಾದರಿಯ ಬಿಸಿ ಕಾಣುತ್ತಿದೆ. ಮಧ್ಯಪ್ರದೇಶದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವ ಬಗ್ಗೆ ಆರ್‌ಎಸ್‌ಎಸ್‌ ಸ್ವಯಂಸೇವಕ, ಮಾಜಿ ಪ್ರಚಾರಕರೊಬ್ಬರು ಸುಳಿವು ನೀಡಿದ್ದಾರೆ. ಇದೀಗ ರಾಷ್ಟ್ರದಾದ್ಯಂತ ಇದು ಚರ್ಚೆಯ ವಿಷಯವಾಗಿದೆ.

ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಪ್ರಚಾರಕ ಹಾಗೂ ಪ್ರಮುಖರ ಗುಂಪು ಜನಹಿತ್ ಪಕ್ಷ ಎಂಬ ಹೊಸ ರಾಜಕೀಯ ಸಂಘಟನೆಯನ್ನು ರಚಿಸುವ ನಿರ್ಧಾರವನ್ನು ಪ್ರಕಟಿಸಿದೆ. ಮಧ್ಯಪ್ರದೇಶದ ರಾಜಕೀಯ ರಂಗದಲ್ಲಿ ಹೊಸ ಪಕ್ಷದ ಸ್ಥಾಪನೆಯಾಗಲು ಈಗ ಸಿದ್ಧತೆಗಳು ನಡೆಯುತ್ತಿವೆ. ಈ ವರ್ಷದ ಕೊನೆಗೆ ಚುನಾವಣೆಗೆ ಮುಂಚಿತವಾಗಿ ಆರಂಭಗೊಳ್ಳುವ ಸಾಧ್ಯತೆ ಇದೆ.ಹೊಸ ಪಕ್ಷ ಸ್ಥಾಪನೆಯ ಬಗ್ಗೆ ನಡೆದ ಸಭೆಯಲ್ಲಿ  ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿರುವ ಜಾರ್ಖಂಡ್‌ನ ಐವರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.  ಮಾಜಿ ಆರ್‌ಎಸ್‌ಎಸ್ ಪ್ರಚಾರಕರಾದ ವಿಶಾಲ್ ಬಿಂದಾಲ್, ಮನೀಶ್ ಕಾಳೆ ಮತ್ತು ಅಭಯ್ ಜೈನ್ ಜನಹಿತ್ ಪಕ್ಷದ ಮುಂಚೂಣಿಯಲ್ಲಿದ್ದಾರೆ. ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದ   ಜೊತೆ ಗುರುತಿಸಿಕೊಂಡಿದ್ದ ರವಿ ದತ್ ಸಿಂಗ್  ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು.

ಅಸ್ತಿತ್ವದಲ್ಲಿರುವ ರಾಜಕೀಯ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಂದ ವಿಮುಖವಾಗಿವೆ.  ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಕ್ಷವನ್ನು ರಚಿಸಿದ್ದೇವೆ ಎಂದು ಪಕ್ಷದ ಪ್ರಮುಖ ಅಭಯ್ ಜೈನ್ ಹೇಳಿದ್ದಾರೆ.

2007ರವರೆಗೆ ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ ಮತ್ತು ಸಿಕ್ಕಿಂನಲ್ಲಿಯೂ ಕೆಲಸ ಮಾಡಿದ ಪ್ರಚಾರಕರು ಇದ್ದು , ಈಗಲೂ ಅದೇ ಸಿದ್ಧಾಂತದೊಂದಿಗೆ ರಾಷ್ಟ್ರದ ಉನ್ನತಿಗಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಸಂಸದರ ಗ್ವಾಲಿಯರ್ ಮತ್ತು ರೇವಾ ಪ್ರದೇಶದ ಮತ್ತೊಬ್ಬ ಮಾಜಿ ಪ್ರಚಾರಕ ಮನೀಶ್ ಕಾಳೆ (55) ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿಯೊಂದಿಗೆ ಅತೃಪ್ತಿ ಹೊಂದಿದ್ದರೂ ಇನ್ನೂ ಹಿಂದೂ ಮನಸ್ಥಿತಿಯನ್ನು ಹೊಂದಿರುವವರು ಇತರ ಪಕ್ಷಗಳಿಗಿಂತ ವಿಭಿನ್ನವಾಗಿ ಕೆಲಸ ಮಾಡಲಿದೆ ಈ ಹೊಸ ಪಕ್ಷ.

ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದೊಂದಿಗೆ  ಸಂಬಂಧ ಹೊಂದಿದ್ದ ರವಿ ದತ್ ಸಿಂಗ್ ಅವರ ಪ್ರಕಾರ, ಅವರು ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯದಲ್ಲೂ ಕಳೆದ ಕೆಲವು ಸಮಯಗಳಿಂದ ಇದೇ ಮಾದರಿಯ ಹೋರಾಟ ಬಿಜೆಪಿ ಒಳಗೆ ನಡೆಯುತ್ತಿದೆ. ರಾಜ್ಯದಲ್ಲೂ ಮಾಜಿ ಪ್ರಚಾರಕರೊಬ್ಬರು ಚುನಾವಣೆಯ ಸಂದರ್ಭ ಹಲವು ಪ್ರಶ್ನೆಗಳನ್ನು ಮಾಡಿದ್ದರು. ಈಚೆಗೆ ಹಲವು ಮಂದಿ ಬಿಜೆಪಿ ಹಾಗೂ ಸಂಘಪರಿವಾರದ ನಿಲುವುಗಳಿಂದ, ಸ್ವಜನಪಕ್ಷಪಾತ ಇತ್ಯಾದಿಗಳ ಕಾರಣ ನೀಡಿ ಸಕ್ರಿಯ ಚಟುವಟಿಕೆಯಿಂದ ದೂರ ಉಳಿದಿದ್ದಾರೆ. ಇಂದಿನ ರಾಜಕೀಯ ಬೆಳವಣಿಗೆಗಳು ಅನೇಕ ಹಿರಿಯ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ, ಈ ನಡುವೆಯೇ ಮಧ್ಯಪ್ರದೇಶದಲ್ಲಿ ರಾಜಕೀಯ ಪಕ್ಷ ಸ್ಥಾಪನೆಯ ಸುದ್ದಿಗಳು ಸದ್ದು ಮಾಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago