Advertisement
ಸುದ್ದಿಗಳು

ಆರ್‌ಎಸ್‌ಎಸ್‌ ಮಾಜಿ ಪ್ರಚಾರಕರಿಂದ ನೂತನ ರಾಜಕೀಯ ಪಕ್ಷ ಸ್ಥಾಪನೆ | ಮಧ್ಯಪ್ರದೇಶದಲ್ಲಿ ಘೋಷಣೆ |

Share

ರಾಷ್ಟ್ರೀಯ ಸ್ವಯಂ ಸೇವಕ ಸಂಘವು  ಬಹುದೊಡ್ಡ ಸೇವಾ ಸಂಘಟನೆ. ಅದರ ಅಂಗ ಸಂಸ್ಥೆಗಳಾಗಿ ಸಮಾಜದ ವಿವಿಧ ಸ್ತರಗಳಲ್ಲಿ ವಿವಿಧ ಸಂಘಟನೆಗಳು ಬೆಳೆದವು. ಲಕ್ಷಾಂತರ ಸ್ವಯಂಸೇವಕರು ಬೆಳೆದರು. ಆರ್‌ಎಸ್‌ಎಸ್‌ ಸಾಮಾಜಿಕ ಕೆಲಸ ಮಾಡಿದರೆ ರಾಜಕೀಯ ಕ್ಷೇತ್ರದಲ್ಲಿ ಬಿಜೆಪಿಯನ್ನು ಬೆಳೆಸಿತು. ಹಿಂದುತ್ವವೇ ಬಿಜೆಪಿಯ ಉಸಿರು ಎಂದು ಬೆಳೆಸಲಾಯಿತು. ಇದೀಗ ದೇಶದ ವಿವಿಧ ಕಡೆ ಬಿಜೆಪಿ ಬಗ್ಗೆ ವಿರೋಧಿ ಅಲೆ ಕಾಣಿಸಿಕೊಳ್ಳುವುದರ ಜೊತೆಗೆ ಆರ್‌ಎಸ್‌ ಎಸ್‌ ಮಾಜಿ ಪ್ರಮುಖರು ಪಕ್ಷ ಸ್ಥಾಪನೆ, ಪಕ್ಷೇತರ ಹೀಗೇ ಸ್ಫರ್ಧಿಸುವುದು ಕಾಣುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅಂತಹದ್ದೇ ಬಿಸಿ ಮುಟ್ಟಿದ್ದರೆ, ಇದೀಗ ಮಧ್ಯಪ್ರವೇಶದಲ್ಲೂ ಅದೇ ಮಾದರಿಯ ಬಿಸಿ ಕಾಣುತ್ತಿದೆ. ಮಧ್ಯಪ್ರದೇಶದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುವ ಬಗ್ಗೆ ಆರ್‌ಎಸ್‌ಎಸ್‌ ಸ್ವಯಂಸೇವಕ, ಮಾಜಿ ಪ್ರಚಾರಕರೊಬ್ಬರು ಸುಳಿವು ನೀಡಿದ್ದಾರೆ. ಇದೀಗ ರಾಷ್ಟ್ರದಾದ್ಯಂತ ಇದು ಚರ್ಚೆಯ ವಿಷಯವಾಗಿದೆ.

Advertisement
Advertisement

ಮಧ್ಯಪ್ರದೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಪ್ರಚಾರಕ ಹಾಗೂ ಪ್ರಮುಖರ ಗುಂಪು ಜನಹಿತ್ ಪಕ್ಷ ಎಂಬ ಹೊಸ ರಾಜಕೀಯ ಸಂಘಟನೆಯನ್ನು ರಚಿಸುವ ನಿರ್ಧಾರವನ್ನು ಪ್ರಕಟಿಸಿದೆ. ಮಧ್ಯಪ್ರದೇಶದ ರಾಜಕೀಯ ರಂಗದಲ್ಲಿ ಹೊಸ ಪಕ್ಷದ ಸ್ಥಾಪನೆಯಾಗಲು ಈಗ ಸಿದ್ಧತೆಗಳು ನಡೆಯುತ್ತಿವೆ. ಈ ವರ್ಷದ ಕೊನೆಗೆ ಚುನಾವಣೆಗೆ ಮುಂಚಿತವಾಗಿ ಆರಂಭಗೊಳ್ಳುವ ಸಾಧ್ಯತೆ ಇದೆ.ಹೊಸ ಪಕ್ಷ ಸ್ಥಾಪನೆಯ ಬಗ್ಗೆ ನಡೆದ ಸಭೆಯಲ್ಲಿ  ಆರ್‌ಎಸ್‌ಎಸ್ ಹಿನ್ನೆಲೆ ಹೊಂದಿರುವ ಜಾರ್ಖಂಡ್‌ನ ಐವರು ಸೇರಿದಂತೆ 200 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.  ಮಾಜಿ ಆರ್‌ಎಸ್‌ಎಸ್ ಪ್ರಚಾರಕರಾದ ವಿಶಾಲ್ ಬಿಂದಾಲ್, ಮನೀಶ್ ಕಾಳೆ ಮತ್ತು ಅಭಯ್ ಜೈನ್ ಜನಹಿತ್ ಪಕ್ಷದ ಮುಂಚೂಣಿಯಲ್ಲಿದ್ದಾರೆ. ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದ   ಜೊತೆ ಗುರುತಿಸಿಕೊಂಡಿದ್ದ ರವಿ ದತ್ ಸಿಂಗ್  ಕೂಡಾ ಸಭೆಯಲ್ಲಿ ಭಾಗವಹಿಸಿದ್ದರು.

Advertisement

ಅಸ್ತಿತ್ವದಲ್ಲಿರುವ ರಾಜಕೀಯ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಂದ ವಿಮುಖವಾಗಿವೆ.  ಎಲ್ಲಾ ರಾಜಕೀಯ ಪಕ್ಷಗಳ ಸಂಸ್ಕೃತಿ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ವಿರುದ್ಧವಾಗಿರುವುದರಿಂದ ನಾವು ಜನಹಿತ್ ಪಕ್ಷವನ್ನು ರಚಿಸಿದ್ದೇವೆ ಎಂದು ಪಕ್ಷದ ಪ್ರಮುಖ ಅಭಯ್ ಜೈನ್ ಹೇಳಿದ್ದಾರೆ.

2007ರವರೆಗೆ ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ ಮತ್ತು ಸಿಕ್ಕಿಂನಲ್ಲಿಯೂ ಕೆಲಸ ಮಾಡಿದ ಪ್ರಚಾರಕರು ಇದ್ದು , ಈಗಲೂ ಅದೇ ಸಿದ್ಧಾಂತದೊಂದಿಗೆ ರಾಷ್ಟ್ರದ ಉನ್ನತಿಗಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಸಂಸದರ ಗ್ವಾಲಿಯರ್ ಮತ್ತು ರೇವಾ ಪ್ರದೇಶದ ಮತ್ತೊಬ್ಬ ಮಾಜಿ ಪ್ರಚಾರಕ ಮನೀಶ್ ಕಾಳೆ (55) ಅವರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

ಬಿಜೆಪಿಯೊಂದಿಗೆ ಅತೃಪ್ತಿ ಹೊಂದಿದ್ದರೂ ಇನ್ನೂ ಹಿಂದೂ ಮನಸ್ಥಿತಿಯನ್ನು ಹೊಂದಿರುವವರು ಇತರ ಪಕ್ಷಗಳಿಗಿಂತ ವಿಭಿನ್ನವಾಗಿ ಕೆಲಸ ಮಾಡಲಿದೆ ಈ ಹೊಸ ಪಕ್ಷ.

ಸಂಘ ಪರಿವಾರದ ಸಂಘಟನೆಯಾದ ಭಾರತೀಯ ಕಿಸಾನ್ ಸಂಘದೊಂದಿಗೆ  ಸಂಬಂಧ ಹೊಂದಿದ್ದ ರವಿ ದತ್ ಸಿಂಗ್ ಅವರ ಪ್ರಕಾರ, ಅವರು ಸಭೆಯಲ್ಲಿ ಭಾಗವಹಿಸಿದ್ದರು.

Advertisement

ರಾಜ್ಯದಲ್ಲೂ ಕಳೆದ ಕೆಲವು ಸಮಯಗಳಿಂದ ಇದೇ ಮಾದರಿಯ ಹೋರಾಟ ಬಿಜೆಪಿ ಒಳಗೆ ನಡೆಯುತ್ತಿದೆ. ರಾಜ್ಯದಲ್ಲೂ ಮಾಜಿ ಪ್ರಚಾರಕರೊಬ್ಬರು ಚುನಾವಣೆಯ ಸಂದರ್ಭ ಹಲವು ಪ್ರಶ್ನೆಗಳನ್ನು ಮಾಡಿದ್ದರು. ಈಚೆಗೆ ಹಲವು ಮಂದಿ ಬಿಜೆಪಿ ಹಾಗೂ ಸಂಘಪರಿವಾರದ ನಿಲುವುಗಳಿಂದ, ಸ್ವಜನಪಕ್ಷಪಾತ ಇತ್ಯಾದಿಗಳ ಕಾರಣ ನೀಡಿ ಸಕ್ರಿಯ ಚಟುವಟಿಕೆಯಿಂದ ದೂರ ಉಳಿದಿದ್ದಾರೆ. ಇಂದಿನ ರಾಜಕೀಯ ಬೆಳವಣಿಗೆಗಳು ಅನೇಕ ಹಿರಿಯ ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ, ಈ ನಡುವೆಯೇ ಮಧ್ಯಪ್ರದೇಶದಲ್ಲಿ ರಾಜಕೀಯ ಪಕ್ಷ ಸ್ಥಾಪನೆಯ ಸುದ್ದಿಗಳು ಸದ್ದು ಮಾಡಿವೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

3 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

3 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

3 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

3 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

3 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

4 hours ago