arecanut | ಅಡಿಕೆ ಮಾರುಕಟ್ಟೆಗೆ ಸಮಸ್ಯೆಯಾಗುತ್ತಿರುವ ಕಳ್ಳ ಸಾಗಾಣಿಕೆ | 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಸಹಿತ ಮ್ಯಾನ್ಮಾರ್‌ ಪ್ರಜೆಗಳ ಬಂಧನ |

August 14, 2023
10:27 PM
ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆಗೆ ಸತತ ಪ್ರಯತ್ನ ನಡೆಯುತ್ತಿದೆ.

ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4  ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.  

ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror