ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4 ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.
ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…