ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4 ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.
ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…