ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4 ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.
ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…