ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ಮೇಲೆ ಅಡಿಕೆ ಕಳ್ಳಸಾಗಾಣಿಕೆ ಪರಿಣಾಮ ಬೀರುತ್ತಿದೆ. ದೇಶದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೇಡಿಕೆ ಇದ್ದರೂ ಕಳ್ಳ ದಾರಿಯ ಮೂಲಕ ವ್ಯಾಪಕವಾಗಿ ಅಡಿಕೆ ಆಮದಾಗುತ್ತಿದೆ. ಇದರ ಕಾರಣದಿಂದ ಅಡಿಕೆ ಮಾರುಕಟ್ಟೆಯು ಅಸ್ಥಿರತೆಯಿಂದ ಸಾಗಿದೆ. ಈ ನಡುವೆಯೇ ಅಕ್ರಮವಾಗಿ ಭಾರತದೊಳಕ್ಕೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿ ಮೌಲ್ಯದ 200 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಟ ಮಾಡುತ್ತಿದ್ದ 4 ಜನ ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ.ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳ ಕಾರ್ಯಾಚರಣೆ ನಡೆಸಿದ್ದರು.
ದೇಶದಲ್ಲೂ ಅಡಿಕೆ ಮಾರುಕಟ್ಟೆಯೂ ಅಸ್ಥಿರವಾಗಿದೆ. ಆಮದು ಅಡಿಕೆಯು ದೇಶೀಯ ಮಾರುಕಟ್ಟೆಯ ಮೇಲೆ ಇದೀಗ ಪರಿಣಾಮ ಬೀರಿದೆ. ಕಳೆದ ಎರಡು ವಾರಗಳಿಂದ ಏರಿಕೆ ಕಾಣುತ್ತಿದ್ದ ಅಡಿಕೆ ಧಾರಣೆ, ಇದೀಗ ಕಳೆದ ಒಂದು ವಾರದಿಂದ ಅಡಿಕೆ ಧಾರಣೆಯು ಅಸ್ಥಿರತೆಯಿಂದ ಕೂಡಿದೆ.ಈಗಾಗಲೇ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಬಂದಿರುವ ಅಡಿಕೆಯು ಹಲವು ಕಡೆ ದಾಸ್ತಾನು ಇರುವ ಬಗ್ಗೆ ಮಾಹಿತಿ ಇದೆ. ಗಣೇಶ ಚತುರ್ಥಿಯ ಬಳಿಕ ಅಡಿಕೆ ಮಾರುಕಟ್ಟೆಯಲ್ಲಿ ಗಣನೀಯವಾದ ಚೇತರಿಕೆ ಕಾಣುವ ನಿರೀಕ್ಷೆ ಇದೆ.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…