ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

November 6, 2022
5:53 PM

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

Advertisement

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror