ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…
ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…
ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದರ್ಶಿತ್ ಕೆ ಎಸ್, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಬೆಳ್ಳಾರೆದರ್ಶಿತ್…
ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…