ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…