ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…