ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…