ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…