ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…