Advertisement
ಸುದ್ದಿಗಳು

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

Share

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್‌ಎಂಎಸ್ ಬಂದಿದೆ.ಎಸ್‌ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.

ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

52 minutes ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 hour ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

4 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

15 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

1 day ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago