ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…