ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್ಎಂಎಸ್ ಬಂದಿದೆ.ಎಸ್ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.
ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…