Advertisement
ಸುದ್ದಿಗಳು

ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

Share

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

Advertisement
Advertisement

ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್‌ಎಂಎಸ್ ಬಂದಿದೆ.ಎಸ್‌ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.

Advertisement

ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

5 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

11 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

12 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago