ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

September 23, 2023
11:44 AM
ಚೈತ್ರಾ ಕುಂದಾಪುರ  & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್‌ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್‌ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್‌ ಇಂದು ಮತ್ತೆ ಕೋರ್ಟ್‌#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ  & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್‌ ಕೇಸ್‌ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್‌ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror