ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್ ಇಂದು ಮತ್ತೆ ಕೋರ್ಟ್#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ & ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್ ಕೇಸ್ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…