Advertisement
MIRROR FOCUS

ಅಡಿಕೆ ವಹಿವಾಟಿನಲ್ಲಿ ವಂಚನೆ | ಮುಂಬೈ ಉದ್ಯಮಿಗೆ 30 ಲಕ್ಷ ಪಂಗನಾಮ

Share

ಅಡಿಕೆ ವಹಿವಾಟಿನಲ್ಲಿ ಈಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಾತ್ರವಲ್ಲ ಖರೀದಿ-ಮಾರಾಟ ಎರಡೂ ಕಡೆಗಳಲ್ಲಿ ವಂಚನೆ ನಡೆಯುತ್ತಿದೆ.ಇದೀಗ ಅಡಿಕೆ ವ್ಯಾಪಾರದ ಮದ್ಯವರ್ತಿಗೂ 30 ಲಕ್ಷ ರೂಪಾಯಿ ವಂಚಿಸಿದ ಘಟನೆಯೊಂದು ಮುಂಬೈಯಲ್ಲಿ ನಡೆದಿದೆ.

Advertisement

ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಅಡಿಕೆ ಪೂರೈಸುವುದಾಗಿ ನಂಬಿಸಿ , ಉತ್ತಮ ಲಾಭ ಗಳಿಸುವ ಆಮಿಷವೊಡ್ಡಿ ಮುಂಬೈಯ ಅಂಧೇರಿಯ ಉದ್ಯಮಿಯೊಬ್ಬರಿಗೆ ಮೂವರು ವ್ಯಕ್ತಿಗಳು 30 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರ್ ಗುಪ್ತಾ, ಮನೋಜ್ ಪಟೇಲ್ ಮತ್ತು ಮಹೇಂದ್ರ ಶಾ ಆರೋಪಿಗಳು. ಪ್ರಕಾಶ್ ಶುಕ್ಲಾ ವಂಚನೆಗೊಳಗಾದವರು.

ಅಡಿಕೆ ವ್ಯವಹಾರದಲ್ಲಿ ಹೂಡಿಕೆ ಮಾಡುವುದಾಗಿ ಆಮಿಷವೊಡ್ಡಿ ಹಾಗೂ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಅಡಿಕೆ ಮಾಡಿ ಭಾರಿ ಲಾಭದ ಭರವಸೆ ನೀಡಿ  30 ಲಕ್ಷ ವಂಚಿಸಿದ್ದಾರೆ. ಸೊಮಾಲಿಯಾದ ವ್ಯಾಪಾರಿಯೊಂದಿಗೆ  1.3 ಕೋಟಿ ಮೌಲ್ಯದ 52 ಟನ್ ಅಡಿಕೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಇದಕ್ಕಾಗಿ  30 ಲಕ್ಷ ನಗದು ಮುಂಗಡ ಹಣ ನೀಡುವಂತೆ  ಆರೋಪಿಗಳು ಹೇಳಿದ್ದರು. ಅದಕ್ಕೂ ಮೊದಲು ನಂಬಿಕೆ ಬರುವಂತೆ ನಟಿಸಿದ್ದರು, ವಿವಿಧ ಬಾರಿ ಸಭೆ ಸೇರಿ ಮಾತುಕತೆ ನಡೆಸಿದ್ದರು.  ಹಣ ಪಾವತಿಯಾದ ಬಳಿಕ ಆರೋಪಿಗಳು ಯಾವುದೇ ಕರೆಗಳಿಗೆ ಸ್ಪಂದಿಸುತ್ತಿರಲಿಲ್ಲ ಎಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತೀ ಸಭೆಯಲ್ಲಿ ಆರೋಪಿಗಳು 52 ಟನ್ ಅಡಿಕೆಯನ್ನು ಪ್ರತಿ ಕಿಲೋಗ್ರಾಂಗೆ 250 ರೂ.ಗೆ ಬರುವುದಾಗು ಹೇಳಿದ್ದರು. ಅಂದರೆ 1.30 ಕೋಟಿ ರೂ. ಮೌಲ್ಯದ್ದಾಗಿದೆ. ಆದರೆ 30 ಲಕ್ಷ ರೂ. ಮುಂಗಡ ನಗದು ನೀಡುವಂತೆ ಹೇಳಿದ್ದರು. ಉಳಿದ ಮೊತ್ತವನ್ನು ಚೆಕ್ ಅಥವಾ ಆರ್‌ಟಿಜಿಎಸ್ ಮೂಲಕ ಅಡಿಕೆ ತಲುಪಿದ ನಂತರ ಪಾವತಿಸಬಹುದು ಎಂದು ಭರವಸೆ ನೀಡಿದ್ದರು.ಇದೀಗ ಪ್ರಕರಣ ದಾಖಲಾಗಿದೆ.

Source: Indian Express

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

2 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

11 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

15 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

16 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

16 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago