ಅಡಿಕೆ ವಹಿವಾಟಿನಲ್ಲಿ ಈಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಅಡಿಕೆ ಬೆಳೆಯುವ ಪ್ರದೇಶದಲ್ಲಿ ಮಾತ್ರವಲ್ಲ ಖರೀದಿ-ಮಾರಾಟ ಎರಡೂ ಕಡೆಗಳಲ್ಲಿ ವಂಚನೆ ನಡೆಯುತ್ತಿದೆ.ಇದೀಗ ಅಡಿಕೆ ವ್ಯಾಪಾರದ ಮದ್ಯವರ್ತಿಗೂ 30 ಲಕ್ಷ ರೂಪಾಯಿ ವಂಚಿಸಿದ ಘಟನೆಯೊಂದು ಮುಂಬೈಯಲ್ಲಿ ನಡೆದಿದೆ.
ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಅಡಿಕೆ ಪೂರೈಸುವುದಾಗಿ ನಂಬಿಸಿ , ಉತ್ತಮ ಲಾಭ ಗಳಿಸುವ ಆಮಿಷವೊಡ್ಡಿ ಮುಂಬೈಯ ಅಂಧೇರಿಯ ಉದ್ಯಮಿಯೊಬ್ಬರಿಗೆ ಮೂವರು ವ್ಯಕ್ತಿಗಳು 30 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರ್ ಗುಪ್ತಾ, ಮನೋಜ್ ಪಟೇಲ್ ಮತ್ತು ಮಹೇಂದ್ರ ಶಾ ಆರೋಪಿಗಳು. ಪ್ರಕಾಶ್ ಶುಕ್ಲಾ ವಂಚನೆಗೊಳಗಾದವರು.
ಅಡಿಕೆ ವ್ಯವಹಾರದಲ್ಲಿ ಹೂಡಿಕೆ ಮಾಡುವುದಾಗಿ ಆಮಿಷವೊಡ್ಡಿ ಹಾಗೂ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಅಡಿಕೆ ಮಾಡಿ ಭಾರಿ ಲಾಭದ ಭರವಸೆ ನೀಡಿ 30 ಲಕ್ಷ ವಂಚಿಸಿದ್ದಾರೆ. ಸೊಮಾಲಿಯಾದ ವ್ಯಾಪಾರಿಯೊಂದಿಗೆ 1.3 ಕೋಟಿ ಮೌಲ್ಯದ 52 ಟನ್ ಅಡಿಕೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಇದಕ್ಕಾಗಿ 30 ಲಕ್ಷ ನಗದು ಮುಂಗಡ ಹಣ ನೀಡುವಂತೆ ಆರೋಪಿಗಳು ಹೇಳಿದ್ದರು. ಅದಕ್ಕೂ ಮೊದಲು ನಂಬಿಕೆ ಬರುವಂತೆ ನಟಿಸಿದ್ದರು, ವಿವಿಧ ಬಾರಿ ಸಭೆ ಸೇರಿ ಮಾತುಕತೆ ನಡೆಸಿದ್ದರು. ಹಣ ಪಾವತಿಯಾದ ಬಳಿಕ ಆರೋಪಿಗಳು ಯಾವುದೇ ಕರೆಗಳಿಗೆ ಸ್ಪಂದಿಸುತ್ತಿರಲಿಲ್ಲ ಎಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತೀ ಸಭೆಯಲ್ಲಿ ಆರೋಪಿಗಳು 52 ಟನ್ ಅಡಿಕೆಯನ್ನು ಪ್ರತಿ ಕಿಲೋಗ್ರಾಂಗೆ 250 ರೂ.ಗೆ ಬರುವುದಾಗು ಹೇಳಿದ್ದರು. ಅಂದರೆ 1.30 ಕೋಟಿ ರೂ. ಮೌಲ್ಯದ್ದಾಗಿದೆ. ಆದರೆ 30 ಲಕ್ಷ ರೂ. ಮುಂಗಡ ನಗದು ನೀಡುವಂತೆ ಹೇಳಿದ್ದರು. ಉಳಿದ ಮೊತ್ತವನ್ನು ಚೆಕ್ ಅಥವಾ ಆರ್ಟಿಜಿಎಸ್ ಮೂಲಕ ಅಡಿಕೆ ತಲುಪಿದ ನಂತರ ಪಾವತಿಸಬಹುದು ಎಂದು ಭರವಸೆ ನೀಡಿದ್ದರು.ಇದೀಗ ಪ್ರಕರಣ ದಾಖಲಾಗಿದೆ.
Source: Indian Express
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…