ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

November 6, 2022
5:53 PM

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

Advertisement
Advertisement

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror