ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

November 6, 2022
5:53 PM

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror