ಸುದ್ದಿಗಳು

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

Advertisement

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

10 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

11 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

11 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

21 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

2 days ago