ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…