ಸುದ್ದಿಗಳು

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

Advertisement
Advertisement

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

20 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

20 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

20 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

21 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

21 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

21 hours ago