ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490