ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…