Advertisement
ಸುದ್ದಿಗಳು

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

Share

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

5 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

12 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

20 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

21 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago