ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…