ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…