Advertisement
ಸುದ್ದಿಗಳು

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

Share

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್​ ಬಂದ ಘಟನೆ ನಡೆದಿದೆ.

ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್​ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್​ ಮಾಡಿಸಬೇಕು ಎಂದು ಬಂದ ಎಸ್​ಎಂಎಸ್ ಲಿಂಕ್​ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

6 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

8 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

9 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago