ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ ಬ್ಯಾಂಕ್ ಮೂಲಕ ತಡೆ ಹಿಡಿದ ಹಿನ್ನೆಲೆ ಮಹಿಳೆಗೆ 3 ಲಕ್ಷ ರೂ. ವಾಪಸ್ ಬಂದ ಘಟನೆ ನಡೆದಿದೆ.
ಕಳೆದ ಅಕ್ಟೋಬರ್ ಕೊನೆಯ ವಾರ ಕಾರವಾರ ನಗರದ ನಿವಾಸಿ ವಿದ್ಯಾ ಕಾಮತ್ ಅವರು 3.24 ಲಕ್ಷ ರೂ. ಸೈಬರ್ ವಂಚನೆಯಾದ ಬಗ್ಗೆ ದೂರು ದಾಖಲಿಸಿದ್ದರು. ಅವರು ತಮ್ಮ ಚಿಕ್ಕಮ್ಮನ ಎಸ್ಬಿಐ ಬ್ಯಾಂಕ್ ಖಾತೆಯನ್ನು ನಿರ್ವಹಿಸುತ್ತಿದ್ದರು. ಪಾನ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಬಂದ ಎಸ್ಎಂಎಸ್ ಲಿಂಕ್ನಲ್ಲಿ ಖಾತೆಯ ಎಲ್ಲ ಮಾಹಿತಿ ನಮೂದಿಸಿದ್ದರು. ಬಳಿಕ ಅವರ ಚಿಕ್ಕಮ್ಮನ ಖಾತೆಯಿಂದ 99 ಸಾವಿರ ರೂ.ನಂತೆ ಮೂರು ಬಾರಿ ಹಾಗೂ ಒಮ್ಮೆ 24 ಸಾವಿರ ರೂ. ಇನ್ನೊಂದು ಖಾತೆಗೆ ವರ್ಗಾವಣೆಯಾಗಿತ್ತು. ಈ ಬಗ್ಗೆ ವಿದ್ಯಾ ಅವರು ಕಾರವಾರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಪೊಲೀಸರು ಹಣ ವರ್ಗಾವಣೆಯಾದ ಖಾತೆಯನ್ನು ತಡೆ ಹಿಡಿದಿದ್ದಾರೆ. ನಂತರ ಮಹಿಳೆಯ 3 ಲಕ್ಷ ರೂ. ಹಣವನ್ನು ಮರಳಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಇನ್ನೂ ಉಳಿದ 24 ಸಾವಿರ ರೂ. ಹಾಗೂ ಆರೋಪಿಗಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…