ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಇದೀಗ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭಿಸಲಾಗುವುದು. 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳು ಓಡಾಡಲಿವೆ ಎಂದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…