ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಇದೀಗ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭಿಸಲಾಗುವುದು. 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳು ಓಡಾಡಲಿವೆ ಎಂದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…