ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಇದೀಗ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್ ಬಸ್ಗಳ ಸಂಚಾರ ಆರಂಭಿಸಲಾಗುವುದು. 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳು ಓಡಾಡಲಿವೆ ಎಂದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…