Advertisement
MIRROR FOCUS

ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ಘೋಷಣೆ | ಜಮ್ಮುವಿನಲ್ಲಿ ಪತ್ರಿಕಾಗೋಷ್ಟಿ ಹಾಗೂ ಪಂಡಿತ್ ಸಂಘಟನೆಯ ಭೇಟಿ |

Share

ಪುತ್ತೂರಿನಲ್ಲಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣವನ್ನು ಘೋಷಿಸಲಾಗಿದೆ.

ಈ ಸಂಬಂಧವಾಗಿ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಹಾಗೂ ನಟ್ಟೋಜ ಫೌಂಡೇಶನ್‍ನ ಟ್ರಸ್ಟಿ ವೈದೇಹಿ ನಟ್ಟೋಜ ಅವರು ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿ ಅಲ್ಲಿನ ಕಾಶ್ಮೀರಿ ಪಂಡಿತ್ ಸಂಘಟನೆಯನ್ನು ಭೇಟಿಯಾಗಿ ಲಿಖಿತ ಭರವಸೆ ನೀಡಿದ್ದಾರೆ. ಅಲ್ಲದೆ ಜಮ್ಮುವಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿಯನ್ನು ಅಲ್ಲಿನ ಮಾಧ್ಯಮಗಳ ಮೂಲಕವೂ ತಿಳಿಸಿಕೊಡಲಾಗಿದೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ತನ್ನ ಆಶ್ರಯದಲ್ಲಿ ಅಂಬಿಕಾ ವಿದ್ಯಾಲಯ (ಸಿಬಿಎಸ್‍ಇ), ವಸತಿಯುಕ್ತ ಹಾಗೂ ದೈನಂದಿನ ಓಡಾಟಕ್ಕನುಗುಣವಾಗಿ ಎರಡು ಪ್ರತ್ಯೇಕ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳು ಹಾಗೂ ಅಂಬಿಕಾ ಪದವಿ ಮಹಾವಿದ್ಯಾಲಯವನ್ನು ನಡೆಸುತ್ತಿದೆ. ಆರನೆಯ ತರಗತಿಯಿಂದ ತೊಡಗಿ ಪದವಿ ಹಂತದವರೆಗೆ ಯಾವುದೇ ತರಗತಿಯಲ್ಲಿ ಓದಲು ಬಯಸುವ ಕಾಶ್ಮೀರಿ ಪಂಡಿತರ ಮಕ್ಕಳಿಗೆ ಈ ಉಚಿತ ಸೌಲಭ್ಯ ದೊರಕಲಿದೆ. ಜತೆಗೆ ಊಟೋಪಚಾರ ವಸತಿಗಳೂ ಶುಲ್ಕರಹಿತವಾಗಿ ಲಭ್ಯವಾಗಲಿವೆ. ಈ ಮಧ್ಯೆ, ಪುತ್ತೂರಿನ ಕೆಲವು ಸಹೃದಯರೂ ಈ ಯೋಜನೆಗೆ ಕೈಜೋಡಿಸಲಾರಂಭಿಸಿದ್ದಾರೆ. ಕಾಶ್ಮೀರಿ ಪಂಡಿತರ ಮಕ್ಕಳಿಗೆ ತಮ್ಮ ಮನೆಯಲ್ಲಿಯೇ ಉಚಿತವಾಗಿ ಆಶ್ರಯ ಹಾಗೂ ಆಹಾರ ನೀಡಿ ಅಂಬಿಕಾ ಸಂಸ್ಥೆಗಳಲ್ಲಿ ಓದಿಸುವ ಹಿನ್ನೆಲೆಯಲ್ಲಿ ಆಸಕ್ತಿ ತೋರಿದ್ದಾರೆ.

ಜಮ್ಮುವಿನಲ್ಲಿ ನಡೆಸಿದ ಪತ್ರಿಕಾಗೋಷ್ಟಿಗೆ ಮಾಧ್ಯಮ ವಲಯದಿಂದಲೂ ಅತ್ಯುತ್ತಮ ಪ್ರತಿಕ್ರಿಯೆ ದೊರಕಿದೆ. ಅನೇಕ ವಾಹಿನಿಗಳು ಹಾಗೂ ಪತ್ರಿಕೆಗಳು ಈ ಉಚಿತ ಶಿಕ್ಷಣದ ಕೊಡುಗೆಗೆ ವ್ಯಾಪಕ ಪ್ರಚಾರ ನೀಡಿವೆ. ಸಂದರ್ಶನವನ್ನೂ ನಡೆಸಿವೆ. ಕಾಶ್ಮೀರಿ ಪಂಡಿತರ ಸಂಘಟನೆಯೂ ಈ ಕೊಡುಗೆಯ ಬಗೆಗೆ ಕೃತಜ್ಞತೆ ಸಲ್ಲಿಸಿದೆ. ಮಾತ್ರವಲ್ಲದೆ ಈಗಾಗಲೇ ನಾಲ್ಕಾರು ಮಂದಿ ಕಾಶ್ಮೀರಿ ಪಂಡಿತರು ಅಂಬಿಕಾ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರ್ಪಡೆಗೊಳಿಸುವ ಬಗೆಗೆ ಕರೆ ಮಾಡಿ ವಿಚಾರಿಸಿದ್ದಾರೆ. ಇದಲ್ಲದೆ ದೌರ್ಜನ್ಯಕ್ಕೊಳಪಟ್ಟು ನಿರಾಶ್ರಿತರಾಗಿ ಆಗಮಿಸಿದ ಕಾಶ್ಮೀರಿ ಪಂಡಿತರು ಬೆಂಗಳೂರಿನಲ್ಲಿಯೂ ಅನೇಕ ಮಂದಿ ಇದ್ದು, ಅವರ ಮಕ್ಕಳಿಗೂ ಈ ಯೋಜನೆ ಲಭ್ಯವಾಗಲಿದೆ. ಆ ನೆಲೆಯಲ್ಲಿಯೇ ಕರ್ನಾಟಕದಲ್ಲೂ ಅಂಬಿಕಾ ಸಂಸ್ಥೆಯ ಕೊಡುಗೆಯ ಬಗೆಗೆ ಮರು ಪ್ರಕಟಣೆ ನೀಡಲಾಗುತ್ತಿದೆ.

ದೇಶದ ಬಗ್ಗೆ, ನೊಂದವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಇತ್ತೀಚೆಗಷ್ಟೇ ಬಿಡುಗಡೆಯಾದ ‘ಕಾಶ್ಮೀರಿ ಫೈಲ್ಸ್’ ಚಿತ್ರವನ್ನು ತನ್ನೆಲ್ಲಾ ವಿದ್ಯಾರ್ಥಿಗಳಿಗೆ ತೋರಿಸಿ ಕಾಶ್ಮೀರದ ಪಂಡಿತರ ಮೇಲಾದ ದೌರ್ಜನ್ಯದ ಕರಾಳ ಸತ್ಯವನ್ನು ಯುವ ಸಮುದಾಯದ ಮುಂದೆ ಅನಾವರಣಗೊಳಿಸಿ ಜಾಗೃತಿ ಮೂಡಿಸಿದೆ.
ಕಾಶ್ಮೀರಿ ಪಂಡಿತರ ಮೇಲಾದ ದೌರ್ಜನ್ಯ ತುಂಬಾ ಆಘಾತಕಾರಿಯಾದದ್ದು. ಹೇಗೆ ದೇಹದ ಯಾವುದೇ ಭಾಗಕ್ಕೆ ಗಾಯವಾದರೂ ನಾವು ತಕ್ಷಣ ಗಮನಹರಿಸುತ್ತೇವೆಯೊ, ಹಾಗೆಯೇ ದೇಶದ ಯಾವುದೇ ಭಾಗದಲ್ಲಿ ದೌರ್ಜನ್ಯ ನಡೆದರೂ ಅದಕ್ಕೆ ಸ್ಪಂದಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಸಾಮಾಜಿಕ ಹಾಗೂ ನೈತಿಕ ಜವಾಬ್ದಾರಿಯ ನೆಲೆಯಿಂದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿವೆ
. – – ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago