ಕುರಿ- ಮೇಕೆ ಸಾಕಾಣಿಕೆಯು ಅತ್ಯಂತ ಲಾಭದಾಯಕವಾಗಿ ಮುಂದುವರಿಯುತ್ತಿದ್ದರೂ. ಎಷ್ಟೋ ಜನರಿಗೆ ಆದರ ಬಗ್ಗೆ ಸರಿಯಾದ ಮಾಹಿತಿಗಳು ಸಿಗುತ್ತಿಲ್ಲ. ಇದಕ್ಕಾಗಿಯೇ, ವೈಜ್ಞಾನಿಕ ರೀತಿಯಲ್ಲಿ ಸಾಕಾಣಿಕೆ ಹೇಗೆ ಮಾಡಬೇಕು ಎಂಬುದನ್ನು ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಂಪೂರ್ಣ ಉಚಿತ ತರಬೇತಿಯನ್ನು ಆಯೋಜಿಸಿದೆ.
ಉಚಿತ ತರಬೇತಿಯು 2026 ರ ಜನವರಿ 19 ರಿಂದ ಪ್ರಾರಂಭವಾಗಿ ಒಟ್ಟು 13 ದಿನಗಳ ಕಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಸೊಣಹಳ್ಳಿಪುರ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ಫೋಟ್ ಅಳತೆಯ ಫೋಟೋ
ಕುರಿ-ಮೇಕೆ ಸಾಕಾಣಿಕೆಗೆ ಸಿಗುವ ಭರ್ಜರಿ ಯೋಜನೆಗಳು: ತರಬೇತಿ ಪಡೆದ ನಂತರ ಉದ್ಯಮ ಆರಂಭಿಸಲು ಹಣಕಾಸಿನ ಚಿಂತೆ ಬೇಡ. ಏಕೆಂದರೆ ಈ ಬ್ಯಾಂಕ್ ಹಲವಾರು ಯೋಜನೆಗಳನ್ನು ಆರಂಭಿಸುತ್ತಿದೆ.
*ರಾಷ್ಟ್ರೀಯ ಜಾನುವಾರು ಮಿಷನ್ (NLM): ಕುರಿ ಸಾಕಾಣಿಕೆ ಆರಂಭಿಸಲು ಬರೋಬ್ಬರಿ ರೂ 25 ಲಕ್ಷದವರೆಗೆ ಶೇ. 50% ರಷ್ಟು ಸಬ್ಸಿಡಿ ಸಿಗುತ್ತದೆ.
* ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: 20ಕುರಿ+1 ಮೇಕೆ ಘಟಕಕ್ಕೆ ಒಟ್ಟು ರೂ.1.75 ಲಕ್ಷ ವೆಚ್ಚದಲ್ಲಿ ಸರ್ಕಾರದಿಂದ ರೂ.43,750 ಸಹಾಯಧನ ಮತ್ತು ಕಡಿಮೆ ಬಡ್ಡಿದರದಲ್ಲಿ ರೂ87,500 ಸಾಲ ಸೌಲಭ್ಯವಿದೆ.
* ನರೇಗಾ ಯೋಜನೆ (NREGA): ಕುರಿಗ ಶೆಡ್ ನಿರ್ಮಾಣಕ್ಕೆ ರೂ68,000 ವರೆಗೆ ಆರ್ಥಿಕ ನೆರವು ಪಡೆಯಬಹುದು.
* ಇತರೆ ಯೋಜನೆಗಳು: ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ದಿ ನಗಮದಿಂದ ಪರಿಶಿಷ್ಟ ಜಾತಿಯ ರೈತರಿಗೆ ಶೇ.50% ಸಬ್ಸಿಡಿ ಹಾಗೂ ಸಹಕಾರ ಸಂಘಗಳ ಮೂಲಕವೂ ಸಾಲ ಸೌಲಭ್ಯಗಳು ಲಭ್ಯವಿದೆ.
ನೋಂದಾಯಿಸಿಕೊಳ್ಳುವ ವಿಧಾನ: ಆಸಕ್ತಿಗಳು ಈ ಕೆಳಗನ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಿ: 8970476050, 9591514154, 9686248369, 8970446644, 9505894247 .
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…