Advertisement
ಸುದ್ದಿಗಳು

ಕುರಿ ಸಾಕಾಣಿಕೆಗೆ ಬ್ಯಾಂಕ್ ನಿಂದ ಉಚಿತ ತರಬೇತಿ – ಅರ್ಜಿ ಸಲ್ಲಿಸುವ ವಿಧಾನ

Share

ಕುರಿ- ಮೇಕೆ ಸಾಕಾಣಿಕೆಯು ಅತ್ಯಂತ ಲಾಭದಾಯಕವಾಗಿ ಮುಂದುವರಿಯುತ್ತಿದ್ದರೂ. ಎಷ್ಟೋ ಜನರಿಗೆ ಆದರ ಬಗ್ಗೆ ಸರಿಯಾದ ಮಾಹಿತಿಗಳು ಸಿಗುತ್ತಿಲ್ಲ. ಇದಕ್ಕಾಗಿಯೇ, ವೈಜ್ಞಾನಿಕ ರೀತಿಯಲ್ಲಿ ಸಾಕಾಣಿಕೆ ಹೇಗೆ ಮಾಡಬೇಕು ಎಂಬುದನ್ನು ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಂಪೂರ್ಣ ಉಚಿತ ತರಬೇತಿಯನ್ನು ಆಯೋಜಿಸಿದೆ.

ಉಚಿತ ತರಬೇತಿಯು 2026 ರ ಜನವರಿ 19 ರಿಂದ ಪ್ರಾರಂಭವಾಗಿ ಒಟ್ಟು 13 ದಿನಗಳ ಕಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಸೊಣಹಳ್ಳಿಪುರ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿದೆ.

ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ಫೋಟ್ ಅಳತೆಯ ಫೋಟೋ

ಕುರಿ-ಮೇಕೆ ಸಾಕಾಣಿಕೆಗೆ ಸಿಗುವ ಭರ್ಜರಿ ಯೋಜನೆಗಳು:  ತರಬೇತಿ ಪಡೆದ ನಂತರ ಉದ್ಯಮ ಆರಂಭಿಸಲು ಹಣಕಾಸಿನ ಚಿಂತೆ ಬೇಡ. ಏಕೆಂದರೆ ಈ ಬ್ಯಾಂಕ್ ಹಲವಾರು ಯೋಜನೆಗಳನ್ನು ಆರಂಭಿಸುತ್ತಿದೆ.

*ರಾಷ್ಟ್ರೀಯ ಜಾನುವಾರು ಮಿಷನ್ (NLM): ಕುರಿ ಸಾಕಾಣಿಕೆ ಆರಂಭಿಸಲು ಬರೋಬ್ಬರಿ ರೂ 25 ಲಕ್ಷದವರೆಗೆ ಶೇ. 50% ರಷ್ಟು ಸಬ್ಸಿಡಿ ಸಿಗುತ್ತದೆ.
* ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: 20ಕುರಿ+1 ಮೇಕೆ ಘಟಕಕ್ಕೆ ಒಟ್ಟು ರೂ.1.75 ಲಕ್ಷ ವೆಚ್ಚದಲ್ಲಿ ಸರ್ಕಾರದಿಂದ ರೂ.43,750 ಸಹಾಯಧನ ಮತ್ತು ಕಡಿಮೆ ಬಡ್ಡಿದರದಲ್ಲಿ ರೂ87,500 ಸಾಲ ಸೌಲಭ್ಯವಿದೆ.
* ನರೇಗಾ ಯೋಜನೆ (NREGA): ಕುರಿಗ ಶೆಡ್ ನಿರ್ಮಾಣಕ್ಕೆ ರೂ68,000 ವರೆಗೆ ಆರ್ಥಿಕ ನೆರವು ಪಡೆಯಬಹುದು.
* ಇತರೆ ಯೋಜನೆಗಳು: ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ದಿ ನಗಮದಿಂದ ಪರಿಶಿಷ್ಟ ಜಾತಿಯ ರೈತರಿಗೆ ಶೇ.50% ಸಬ್ಸಿಡಿ ಹಾಗೂ ಸಹಕಾರ ಸಂಘಗಳ ಮೂಲಕವೂ ಸಾಲ ಸೌಲಭ್ಯಗಳು ಲಭ್ಯವಿದೆ.
ನೋಂದಾಯಿಸಿಕೊಳ್ಳುವ ವಿಧಾನ: ಆಸಕ್ತಿಗಳು ಈ ಕೆಳಗನ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಿ: 8970476050, 9591514154, 9686248369, 8970446644, 9505894247 .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago