ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ | ರಾಜ್ಯ ಸರ್ಕಾರ ಆದೇಶ

November 14, 2023
4:33 PM

ರಾಜ್ಯದ ಕಾಂಗ್ರೆಸ್‌ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror